2. “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.
|
3. ನೀನು ಎರಡು ತುತ್ತೂರಿಗಳನ್ನು ಲಘುಸ್ವರದಿಂದ ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಕೂಡಿರಬೇಕು.
|
4. ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪ್ರಧಾನರಾದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು.
|
5. “ಜನರ ಕುಲಗಳು ಪಾಳೆಯದಿಂದ ಪ್ರಯಾಣ ಮಾಡಬೇಕೆಂಬುದಕ್ಕೆ ಸೂಚನೆಗಾಗಿ ತುತ್ತೂರಿಯನ್ನು ಆರ್ಭಟದಿಂದ ಊದಿಸಬೇಕು. ನೀವು ಮೊದಲನೆ ಸಲ ತುತ್ತೂರಿಯನ್ನು ಆರ್ಭಟದಿಂದ ಊದಿಸುವಾಗ ದೇವದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.
|
6. ನೀವು ಎರಡನೆಯ ಸಲ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸುವಾಗ ದೇವದರ್ಶನಗುಡಾರದ ದಕ್ಷಿಣ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.
|
9. “ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.
|
10. ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”
|
11. ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು.
|
12. ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.
|
14. ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದಾಬನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.
|
17. ಬಳಿಕ ಪವಿತ್ರ ಗುಡಾರವನ್ನು ಕೆಳಗಿಳಿಸಲಾಯಿತು. ಗೇರ್ಷೋನ್ ಮತ್ತು ಮೆರಾರೀ ಕುಲಗಳ ಗಂಡಸರು ಪವಿತ್ರ ಗುಡಾರವನ್ನು ಹೊತ್ತುಕೊಂಡು ಅವರ ಹಿಂದೆ ಹೊರಟರು.
|
18. ಅವರ ತರುವಾಯ ರೂಬೇನ್ ಕುಲದಿಂದ ಮುನ್ನಡೆಸಲ್ಪಟ್ಟ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಹೊರಟರು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೇನಾಧಿಪತಿಯಾಗಿದ್ದನು. ಇಸ್ರೇಲರ ಪ್ರಯಾಣ
|
21. ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.
|
22. ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ.
|
25. ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.
|
29. ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”
|
30. ಆದರೆ ಹೋಬಾಬನು, “ಇಲ್ಲ. ನಾನು ನಿಮ್ಮೊಂದಿಗೆ ಬರುವುದಿಲ್ಲ. ನಾನು ನನ್ನ ದೇಶಕ್ಕೂ ನನ್ನ ಜನರ ಬಳಿಗೂ ಹೋಗುವೆನು” ಎಂದು ಉತ್ತರಕೊಟ್ಟನು.
|
31. ಆಗ ಮೋಶೆ, “ದಯಮಾಡಿ ನಮ್ಮನ್ನು ಬಿಟ್ಟು ಹೋಗಬೇಡ. ನಾವು ಮರುಭೂಮಿಯಲ್ಲಿ ಎಲ್ಲಿ ಪಾಳೆಯ ಮಾಡಿಕೊಳ್ಳಬಹುದೆಂಬುದು ನಿನಗೆ ಗೊತ್ತಿದೆ. ನೀನು ನಮ್ಮ ಮಾರ್ಗದರ್ಶಕನಾಗಿರಬಹುದು.
|
32. ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.
|
33. ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.
|
35. ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.
|
36. ಪವಿತ್ರ ಪೆಟ್ಟಿಗೆಯು ಕೆಳಗಿಳಿಸಲ್ಪಟ್ಟಾಗ, ಮೋಶೆಯು, “ಯೆಹೋವನೇ ಇಸ್ರೇಲರ ಲಕ್ಷಾಂತರ ಕುಟುಂಬಗಳ ಬಳಿಗೆ ಹಿಂತಿರುಗಿ ಬಾ” ಎಂದು ಹೇಳುತ್ತಿದ್ದನು.
|