2. “ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನಾನು ನಿಮ್ಮ ನಿವಾಸಕ್ಕಾಗಿ ಒಂದು ದೇಶವನ್ನು ಕೊಡುತ್ತಿದ್ದೇನೆ. ನೀವು ಆ ದೇಶಕ್ಕೆ ಸೇರಿದ ನಂತರ
|
3. ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನ ಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ
|
5. ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನ ಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.
|
6. “ನೀವು ಟಗರನ್ನು ಸಮರ್ಪಿಸುವುದಾದರೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಒಳ್ಳೆಯ ಗೋಧಿಯ ಹಿಟ್ಟನ್ನೂ
|
7. ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.
|
8. “ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನ ಯಜ್ಞವನ್ನಾಗಲಿ ಅರ್ಪಿಸುವವನು
|
10. ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.
|
14. ನಿಮ್ಮ ಮಧ್ಯದಲ್ಲಿ ವಾಸಿಸುವ ವಿದೇಶಿಯರಲ್ಲಿ ಯಾವನೇ ಆಗಲಿ, ಯೆಹೋವನಿಗೆ ಸುಗಂಧಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನು ಮಾಡಬೇಕು.
|
15. ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.
|
20. ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.
|
24. ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.
|
25. “ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.
|
26. ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.
|
29. ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.
|
30. “ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.
|
31. ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.”
|
35. ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು.
|
36. ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು.
|
38. “ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು.
|
39. ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.
|
40. ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ.
|