1. ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.
|
2. ಆದ್ದರಿಂದ ರೂಬೇನ್ ಮತ್ತು ಗಾದ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು:
|
5. ಆದ್ದರಿಂದ ಈ ಪ್ರದೇಶವನ್ನೇ ನಮಗೆ ಸ್ವಾಸ್ತ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವಂತೆ ಮಾಡಬೇಡ.”
|
8. ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ.
|
9. ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ.
|
13. “ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.
|
14. ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ.
|
15. ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.
|
16. ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು.
|
17. ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.
|
18. ಪ್ರತಿಯೊಬ್ಬ ಇಸ್ರೇಲನು ದೇಶದಲ್ಲಿ ತನಗೆ ಬರಬೇಕಾದ ಸ್ವಾಸ್ತ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ.
|
19. ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು.
|
23. 4ಆದರೆ ನೀವು ಈ ಸಂಗತಿಗಳನ್ನು ಮಾಡಿದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.
|
24. ನಿಮ್ಮ ಸ್ತ್ರೀಯರಿಗಾಗಿಯೂ ಮಕ್ಕಳಿಗಾಗಿಯೂ ಊರುಗಳನ್ನು ಕಟ್ಟಿರಿ ಮತ್ತು ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿರಿ. ಬಳಿಕ ನೀವು ವಾಗ್ದಾನ ಮಾಡಿದಂತೆಯೇ ಮಾಡಿರಿ” ಎಂದನು.
|
25. ಆಗ ಗಾದ್ಯರು ಮತ್ತು ರೂಬೇನ್ಯರು ಮೋಶೆಗೆ, “ಸ್ವಾಮೀ, ನಾವು ನಿನ್ನ ಸೇವಕರಾಗಿದ್ದೇವೆ. ಆದ್ದರಿಂದ ನೀನು ಆಜ್ಞಾಪಿಸಿದಂತೆಯೇ ನಾವು ಮಾಡುತ್ತೇವೆ.
|
27. ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು.
|
28. ಆದ್ದರಿಂದ ಮೋಶೆಯು, ಅವರ ಬಗ್ಗೆ ಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರೇಲ್ ಕುಲಗಳ ಗೋತ್ರಪ್ರಧಾನರಿಗೂ ಆದೇಶಗಳನ್ನು ಕೊಟ್ಟನು.
|
29. ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.
|
30. ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು.
|
32. ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು.
|
33. ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
|
36. ಬೇತ್ಹಾರಾನ್ ಎಂಬ ಕೋಟೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು ಮತ್ತು ತಮ್ಮ ಪಶುಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.
|
39. ಮಾಕೀರನ ವಂಶದವರು ಗಿಲ್ಯಾದಿಗೆ ಹೋದರು. (ಮಾಕೀರನು ಮನಸ್ಸೆಯ ಮಗ.) ಅವರು ಆ ಪಟ್ಟಣದಲ್ಲಿ ವಾಸಿಸುತ್ತಿದ್ದ ಅಮೋರಿಯರನ್ನು ಓಡಿಸಿ ಅದನ್ನು ವಶಪಡಿಸಿಕೊಂಡರು.
|
40. ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ತಿಯವರಿಗೆ ಕೊಟ್ಟನು. ಮಾಕೀರನ ವಂಶದವರು ಅಲ್ಲಿ ನೆಲೆಸಿದರು.
|
41. ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು.
|
42. ನೋಬಹ ಎಂಬವನು ಕೆನಾತ್ ಮತ್ತು ಅದರ ಹತ್ತಿರವಿದ್ದ ಚಿಕ್ಕ ಊರುಗಳನ್ನು ವಶಪಡಿಸಿಕೊಂಡು ಅವುಗಳಿಗೆ “ನೋಬಹ” ಎಂಬ ತನ್ನ ಹೆಸರನ್ನೇ ಕೊಟ್ಟನು.
|