2. “ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,
|
3. ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;
|
4. ಅವನು ಹರಕೆ ಮಾಡಿಕೊಂಡಿರುವ ದಿನಗಳಲ್ಲಿ ದ್ರಾಕ್ಷಾಲತೆಯಿಂದ ಉತ್ಪನ್ನವಾಗುವ ಯಾವದನ್ನೂ ತಿನ್ನಬಾರದು. ಅವನು ದ್ರಾಕ್ಷಿಯ ಬೀಜವನ್ನಾಗಲಿ ಸಿಪ್ಪೆಯನ್ನಾಗಲಿ ತಿನ್ನಬಾರದು.
|
5. “ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.
|
7. ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.
|
9. “ಯಾವನಾದರೂ ಇದ್ದಕ್ಕಿದ್ದಂತೆ ಅವನ ಬಳಿಯಲ್ಲೇ ಸತ್ತದ್ದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ತಲೆಯನ್ನು ಕ್ಷೌರ ಮಾಡಿಸಿಕೊಳ್ಳಬೇಕು.
|
10. ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಕಾಡು ಪಾರಿವಾಳವನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.
|
11. ಆಗ ಯಾಜಕನು ಒಂದನ್ನು ದೋಷಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಅವನಿಗೆ ಹೆಣವು ಸೋಂಕಿ ಅಶುದ್ಧನಾದದ್ದರಿಂದ ಈ ಸರ್ವಾಂಗಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. ಆ ಸಮಯದಲ್ಲಿ, ಅವನು ತನ್ನ ತಲೆಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು.
|
12. ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.
|
13. “ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು
|
14. ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರುಷದ ಹೆಣ್ಣು ಕುರಿಮರಿ, ಸಮಾಧಾನ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.
|
15. ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
|
17. ಯಾಜಕನು ಹುಳಿಯಿಲ್ಲದ ರೊಟ್ಟಿಯಿರುವ ಪುಟ್ಟಿಯನ್ನು ಯೆಹೋವನಿಗೆ ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನ ಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆಯೊಂದಿಗೆ ಅರ್ಪಿಸುವನು.
|
18. “ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
|
19. “ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.
|
20. ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.
|
21. “ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
|
27. ಬಳಿಕ ಯೆಹೋವನು, “ಹೀಗೆ ಆರೋನನೂ ಅವನ ಪುತ್ರರೂ ಇಸ್ರೇಲರನ್ನು ನನ್ನ ಹೆಸರಿನಿಂದ ಆಶೀರ್ವದಿಸುವುದರಿಂದ ನಾನು ಅವರನ್ನು ಆಶೀರ್ವದಿಸುವೆನು” ಎಂದನು.
|