1. {ಸೊಲೊಮೋನನ ಜ್ಞಾನೋಕ್ತಿಗಳು} [PS] ಇವು ಸೊಲೊಮೋನನ ಜ್ಞಾನೋಕ್ತಿಗಳು: [PE][PS] ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ. [PE][PS]
2. ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು. [PE][PS]
3. ನೀತಿವಂತರು ಹಸಿವೆಯಿಂದಿರಲು ಯೆಹೋವನು ಬಿಡುವುದಿಲ್ಲ. ದುಷ್ಟರ ಆಸೆಯನ್ನಾದರೋ ಆತನು ಭಂಗಪಡಿಸುತ್ತಾನೆ. [PE][PS]
4. ಸೋಮಾರಿಯು ಬಡವನಾಗಿರುತ್ತಾನೆ. ಕಷ್ಟಪಟ್ಟು ಕೆಲಸ ಮಾಡುವವನು ಐಶ್ವರ್ಯವಂತನಾಗುತ್ತಾನೆ. [PE][PS]
5. ಬುದ್ಧಿವಂತನು ತಕ್ಕಕಾಲದಲ್ಲಿ ಬೆಳೆಯನ್ನು ಕೊಯ್ಯುತ್ತಾನೆ. ಸುಗ್ಗೀಕಾಲದಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು. [PE][PS]
6. ಒಳ್ಳೆಯವನನ್ನು ಆಶೀರ್ವದಿಸುವಂತೆ ಜನರು ದೇವರನ್ನು ಪ್ರಾರ್ಥಿಸುವರು. ದುಷ್ಟನ ಮಾತುಗಳಲ್ಲಾದರೋ ಕುತಂತ್ರವೇ ಅಡಗಿಕೊಂಡಿದೆ. [PE][PS]
7. ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು. [PE][PS]
8. ಜ್ಞಾನಿಯು ಆಜ್ಞೆಗಳಿಗೆ ವಿಧೇಯನಾಗುತ್ತಾನೆ. ಮೂಢನಾದರೋ ವಾದಮಾಡಿ ತನಗೇ ತೊಂದರೆ ತಂದುಕೊಳ್ಳುತ್ತಾನೆ. [PE][PS]
9. ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು. [PE][PS]
10. ಸತ್ಯವನ್ನು ಅಡಗಿಸಿಕೊಳ್ಳುವವನು ತೊಂದರೆಯನ್ನು ಉಂಟುಮಾಡುವನು. ಧೈರ್ಯದಿಂದ ಮಾತಾಡುವವನು ಸಮಾಧಾನಕರನು. [PE][PS]
11. ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿಕೊಂಡಿರುತ್ತದೆ. [PE][PS]
12. ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ. [PE][PS]
13. ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು. [PE][PS]
14. ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೋ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ. [PE][PS]
15. ಐಶ್ವರ್ಯವು ಸಾಹುಕಾರನನ್ನು ಕಾಪಾಡುತ್ತದೆ. ಬಡತನವಾದರೋ ಬಡವನನ್ನು ನಾಶಗೊಳಿಸುತ್ತದೆ. [PE][PS]
16. ಒಳ್ಳೆಯವರಿಗೆ ಪ್ರತಿಫಲವಾಗಿ ಜೀವ ದೊರೆಯುವುದು. ಕೆಡುಕರಿಗೆ ದಂಡನೆಯೇ ಸಂಬಳ. [PE][PS]
17. ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿ ತಪ್ಪಿಸುತ್ತಾನೆ. [PE][PS]
18. ದ್ವೇಷವನ್ನು ಮರೆಮಾಡಲು ಒಬ್ಬನು ಸುಳ್ಳು ಹೇಳಬೇಕಾಗಬಹುದು. ಆದರೆ ಹರಟೆಗಾರನು ನಿಜವಾಗಿಯೂ ಮೂಢನಾಗಿದ್ದಾನೆ. [PE][PS]
19. ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ. [PE][PS]
20. ಒಳ್ಳೆಯವನ ಮಾತುಗಳು ಶುದ್ಧ ಬೆಳ್ಳಿಯಂತಿವೆ. ಕೆಡುಕನ ಆಲೋಚನೆಗಳಾದರೋ ಪ್ರಯೋಜನಕ್ಕೆ ಬಾರವು. [PE][PS]
21. ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು. [PE][PS]
22. ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು. [PE][PS]
23. ಅವಿವೇಕಿಯು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸುತ್ತಾನೆ. ವಿವೇಕಿಯು ಜ್ಞಾನದಲ್ಲಿ ಸಂತೋಷಿಸುತ್ತಾನೆ. [PE][PS]
24. ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು. [PE][PS]
25. ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವರು ಸದಾಕಾಲ ಬಲವಾಗಿ ನಿಲ್ಲುವರು. [PE][PS]
26. ಸೋಮಾರಿಗೆ ಯಾವ ಕೆಲಸವನ್ನೂ ಒಪ್ಪಿಸಬೇಡಿ. ಅವನು ಬಾಯಿಗೆ ಹುಳಿಯಂತೆಯೂ ಕಣ್ಣುಗಳಿಗೆ ಹೊಗೆಯಂತೆಯೂ ನಿಮ್ಮನ್ನು ಬೇಸರಗೊಳಿಸುವನು. [PE][PS]
27. ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೆ ಬಹುಕಾಲ ಬದುಕುವಿರಿ. ಆದರೆ ಕೆಡುಕರು ತಮ್ಮ ಜೀವಮಾನದ ವರ್ಷಗಳನ್ನು ಕಳೆದುಕೊಳ್ಳುವರು. [PE][PS]
28. ಒಳ್ಳೆಯವರ ನಿರೀಕ್ಷೆಗೆ ಸಂತೋಷವೇ ಫಲಿತಾಂಶ. ಕೆಟ್ಟವರ ನಿರೀಕ್ಷೆಗೆ ಶೂನ್ಯವೇ ಫಲಿತಾಂಶ. [PE][PS]
29. ಯೆಹೋವನು ಒಳ್ಳೆಯವರನ್ನು ಕೋಟೆಯಂತೆ ಕಾಪಾಡುತ್ತಾನೆ; ಕೆಡುಕರನ್ನಾದರೊ ನಾಶಮಾಡುತ್ತಾನೆ. [PE][PS]
30. ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು. [PE][PS]
31. ಒಳ್ಳೆಯವರು ಯಾವಾಗಲೂ ಜ್ಞಾನದ ಮಾತುಗಳನ್ನು ಹೇಳುತ್ತಾರೆ; ಕೆಡುಕರ ಮಾತನ್ನು ಜನರು ಕೇಳುವುದಿಲ್ಲ. [PE][PS]
32. ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ. [PE]