1. ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು. [PE][PS]
2. ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು. [PE][PS]
3. ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ. [PE][PS]
4. ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ. [PE][PS]
5. ಮೂರ್ಖನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ. [PE][PS]
6. ಒಳ್ಳೆಯವರ ಮನೆಗಳಲ್ಲಿ ಬಹಳ ಐಶ್ವರ್ಯವಿರುತ್ತದೆ. ಕೆಡುಕರ ಸಂಪಾದನೆಯಾದರೋ ಆಪತ್ತನ್ನು ಬರಮಾಡುತ್ತದೆ. [PE][PS]
7. ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ. [PE][PS]
8. ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು. [PE][PS]
9. ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ. [PE][PS]
10. ನೀತಿಮಾರ್ಗವನ್ನು ತೊರೆದವರಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು. [PE][PS]
11. ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರ ಹೃದಯಗಳಲ್ಲಿರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ. [PE][PS]
12. ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ. [PE][PS]
13. ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು. [PE][PS]
14. ವಿವೇಕಿಯು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ. [PE][PS]
15. ಬಡಜನರ ದಿನಗಳೆಲ್ಲಾ ದುಃಖಕರ. ಸಂತೋಷದ ಹೃದಯದಲ್ಲಿ ಸದಾ ಔತಣ. [PE][PS]
16. ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು. [PE][PS]
17. ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ. [PE][PS]
18. ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿ ಸ್ಥಾಪಿಸುವನು. [PE][PS]
19. ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತರಿಗೆ ಜೀವನ ಸರಾಗ. [PE][PS]
20. ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೋ ತನ್ನ ತಾಯಿಯನ್ನು ಕಡೆಗಣಿಸುವನು. [PE][PS]
21. ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು. [PE][PS]
22. ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. [PE][PS]
23. ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ. [PE][PS]
24. ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ. [PE][PS]
25. ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು. [PE][PS]
26. ಯೆಹೋವನು ದುರಾಲೋಚನೆಗಳನ್ನು ದ್ವೇಷಿಸುವನು; ಕನಿಕರದ ಮಾತುಗಳಲ್ಲಾದರೋ ಸಂತೋಷಪಡುವನು. [PE][PS]
27. ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ. [PE][PS]
28. ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ. [PE][PS]
29. ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ. [PE][PS]
30. ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು. [PE][PS]
31. ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ. [PE][PS]
32. ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು. [PE][PS]
33. ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು. [PE]