2. ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು! PEPS
|
7. ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ. PEPS
|
8. ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು. PEPS
|
11. ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ. PEPS
|
14. ಮಕ್ಕಳು ತಂದೆಯಿಂದ ಮನೆಗಳನ್ನು ಮತ್ತು ಹಣವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳುವರು. ವಿವೇಕಿಯಾದ ಹೆಂಡತಿಯಾದರೋ ಯೆಹೋವನಿಂದ ಬಂದ ಉಡುಗೊರೆ. PEPS
|
16. ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು. PEPS
|
17. ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನಿಗೆ ಮರುಪಾವತಿ ಮಾಡುವನು. PEPS
|
18. ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು. PEPS
|
19. ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು. PEPS
|
23. ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು. PEPS
|
24. ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ. PEPS
|
25. ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು. PEPS
|