2. ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
|
3. ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.
|
4. ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೊ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.
|
5. ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.
|
6. ನಾನು ಗ್ರಹಿಸಿಕೊಂಡಿದ್ದೇನಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗ ಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.
|
8. ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.
|
9. ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.
|
10. ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.
|
12. ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.
|
14. ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ!
|
16. ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ.
|