1. ಕೀರ್ತನೆ ರಚಿಸಲ್ಪಟ್ಟಿತು. ರಚನೆಗಾರ : ದಾವೀದ. ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಹಾಕು.
|
4. ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.
|
6. ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು.
|
7. ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!
|
14. ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!
|
17. ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆಯೂ ವಿಧೇಯತೆಯೂ ಉಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.
|
19. ಆಗ ಜನರು ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.
|