3. ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ,
|
5. ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.
|
7. ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.
|
12. ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.
|
14. ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ.
|
15. ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.
|
19. ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.
|
24. ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೇ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು.
|
28. ನಾನು ಆರಿಸಿಕೊಂಡ ರಾಜನನ್ನು ನನ್ನ ಪ್ರೀತಿಯು ಸದಾಕಾಲ ಸಂರಕ್ಷಿಸುವುದು. ನಾನು ಅವನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಎಂದಿಗೂ ಕೊನೆಯಾಗದು.
|
30. ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದು ಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು.
|
35. ನನ್ನ ಪವಿತ್ರತ್ವದ ಮೇಲೆ ಆಣೆಯಿಟ್ಟು ದಾವೀದನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದೆನು. ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
|
43. ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೊ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.
|
47. ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.
|
49. ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!
|