4. ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.
|
5. ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.
|
6. ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ. ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.
|
7. ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ.
|
10. ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.
|
13. “ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿಕಾಪಾಡು.”
|
14. ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.
|
15. ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.
|
18. ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತು ಬಿಡುವುದಿಲ್ಲ.
|