1. ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
|
2. ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.
|
3. ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಈ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ
|
5. ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು. PEPS
|
6. ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.
|
8. ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.
|
9. ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ,
ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ. |
10. ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ;
ಅವರು ಲೋಕದಲ್ಲಿ ಆಳುವರು.” PS |
11. ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.
|
12. ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು,
ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!” PS |
13. ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ
ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!” |