2. ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
|
3. ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
|
4. ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
|
8. ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
|
9. ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
|
10. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
|
12. ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
|
15. ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
|
16. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
|
21. ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
|
23. ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
|
24. ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
|
25. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
|
26. ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
|
28. ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
|
31. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
|
32. ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
|
34. ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
|
36. ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
|
37. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
|
38. ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
|
39. ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
|
40. ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
|
41. ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
|
42. ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
|