1. ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
|
2. ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
|
3. ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
|
5. ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
|
6. ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು.
|
7. ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
|
9. ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
|
12. ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
|
13. ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
|
14. ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
|
15. ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
|
16. ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
|
17. ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
|
19. ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
|
20. ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
|
21. ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ.
|
22. ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
|
23. ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
|
24. ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
|