2. ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
|
3. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
|
4. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
|
5. ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
|
6. ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
|
10. ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
|
11. ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
|
14. ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
|
17. ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
|
19. ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
|
22. ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
|
23. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
|
24. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
|
25. ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
|
26. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
|
27. ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
|
28. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
|
29. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
|
30. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
|
31. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
|
33. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
|
35. ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
|
36. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
|
37. ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
|
38. ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
|
39. ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
|
40. ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
|
41. ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
|
42. ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
|
46. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
|
47. ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
|