2. ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
|
4. ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
|
5. ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
|
7. ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
|
9. ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
|
13. ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
|
14. ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
|
15. ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
|
19. ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
|
20. ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
|
21. ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
|
22. ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
|
23. ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
|
26. ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
|
29. ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
|
30. ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
|
31. ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
|
33. ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
|
34. ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
|
35. ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
|
39. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
|
40. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
|
41. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
|
43. ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
|