1. ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
|
2. ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
|
4. ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
|
6. ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
|
7. ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
|
8. ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
|
9. ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
|
11. ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
|
12. ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
|
13. ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
|
14. ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
|
15. ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
|
16. ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
|
18. ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.
|
20. ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
|
22. ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.
|
23. ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
|