2. ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
|
3. ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
|
4. ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
|
5. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
|
7. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
|
9. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
|
10. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
|
11. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
|
12. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
|
13. ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
|
14. ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
|
16. ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
|
18. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
|
19. ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
|
20. ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
|
21. ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
|
22. ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
|
23. ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
|
25. ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
|