4. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
|
6. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
|
10. ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
|
11. ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
|
15. ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
|
16. ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
|
17. ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
|
19. ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
|
20. ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
|
22. ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
|
25. ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
|
26. ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
|
27. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
|
30. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
|
31. ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
|
32. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
|
33. ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
|
34. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
|
35. ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
|
36. ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
|
37. ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
|
39. ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
|
42. ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
|
44. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
|
45. ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
|
47. ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
|
49. ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
|
52. ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
|
53. ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
|
54. ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
|
56. ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
|
58. ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
|
59. ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
|
60. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
|
61. ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
|
64. ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
|
66. ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
|
70. ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.
|