1. ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
|
2. ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
|
5. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
|
6. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
|
7. ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
|
9. ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
|
10. ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
|
11. ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
|
13. ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
|
15. ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
|
19. ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
|
20. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
|