1. ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.
|
4. ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
|
8. ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
|
9. ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
|
14. ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
|
15. ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
|
17. ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
|
19. ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
|
20. ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
|
32. ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.
|
33. ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
|