1. ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
|
4. ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
|
7. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
|
9. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
|
11. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
|
13. ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
|
16. ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
|
18. ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
|
19. ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
|
20. ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
|
21. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
|
23. ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
|
27. ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
|
28. ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
|
29. ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
|
30. ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
|
33. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
|