1. ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
|
3. ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
|
6. ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
|
7. ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
|
9. ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
|
10. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
|
11. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
|
12. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
|
13. ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
|
14. ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
|
16. (ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
|
20. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
|
22. ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
|
24. ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
|
25. ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
|
26. ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
|
27. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
|
30. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
|
31. ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
|
32. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
|
33. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
|
34. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
|
36. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
|
37. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
|
38. ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
|
39. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.
|
40. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
|