1. ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
|
2. ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
|
3. ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
|
5. ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
|
8. ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
|
10. ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
|
11. ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
|
13. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
|
14. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
|
15. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
|
16. ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
|
17. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
|
18. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
|
19. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
|
21. ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
|
23. ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
|
25. ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
|
26. ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
|
27. ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
|
28. ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
|
29. ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
|
32. ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
|
33. ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
|
34. ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
|
35. ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
|
37. ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
|
39. ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
|
40. ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
|
41. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
|
42. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
|