1. ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
|
2. ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
|
3. ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
|
4. ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
|
5. ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
|
7. ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
|
8. ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
|
9. ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
|
10. ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
|
11. ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
|
13. ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
|
14. ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
|
16. ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
|
17. ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
|
18. ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
|
19. ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
|
21. ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
|
22. ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
|
23. ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
|