1. ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
|
5. ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
|
7. ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
|
9. ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
|
11. ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
|
13. ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
|
17. ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
|
19. ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.
|
20. ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
|
21. ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.
|
22. ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
|