1. ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
|
4. ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
|
5. ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
|
7. ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
|
10. ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
|
12. ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
|
13. ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
|
15. ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
|
17. ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
|
18. ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
|
19. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
|
21. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
|
23. ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
|
24. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
|
29. ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
|
30. ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
|
32. ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
|
33. ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
|
39. ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
|
41. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
|
44. ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
|
47. ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
|
49. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
|
51. ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
|