1. ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
|
9. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
|
10. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
|
13. ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
|
14. ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
|
15. ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
|
20. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
|
21. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
|
22. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
|
23. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
|
24. ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
|
25. ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
|
26. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
|
27. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
|
29. ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
|
30. ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
|
31. ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
|
32. ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
|
34. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
|
35. ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
|
36. ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
|
37. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
|
38. ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
|
39. ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
|
40. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
|
41. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
|
42. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
|
43. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
|
44. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
|
45. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
|