1. ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
|
2. ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
|
3. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
|
4. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
|
6. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
|
7. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
|
8. ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
|
9. ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
|
10. ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
|
11. ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
|
14. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
|
15. ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
|
16. ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
|
18. ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
|
19. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
|
20. ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
|