2. ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
|
10. ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
|
12. ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
|
14. ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
|
15. ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
|
16. ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
|
18. ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
|
23. ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
|
25. ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
|
26. ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
|
28. ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
|
29. ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
|