2. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
|
3. ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
|
4. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
|
6. ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
|
9. ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
|
10. ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
|
11. ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
|
12. ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
|
14. ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
|
15. ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
|
19. ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
|
20. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
|
21. ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
|
22. ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
|
24. ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
|
26. ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
|
27. ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
|
28. ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
|
30. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
|
31. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
|