1. ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
|
2. ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
|
3. ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
|
4. ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
|
5. ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
|
6. ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
|
9. ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
|
10. ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
|
12. ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
|
13. ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
|
15. ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
|
20. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
|
26. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
|