1. ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
|
4. ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
|
5. ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
|
6. ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
|
7. ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
|
8. ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
|
9. ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
|
10. ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.
|
11. ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
|
12. ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
|
13. ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
|
14. ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
|
16. ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
|
19. ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
|
20. ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು.
|
21. ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
|
22. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
|
23. ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
|
25. ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
|
26. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
|