1. ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
|
2. ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
|
3. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
|
4. ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
|
7. ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
|
10. ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
|
11. ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
|
13. ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
|
14. ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
|
15. ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
|
17. ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
|
18. ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
|
23. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
|
24. ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
|
25. ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
|
27. ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
|
28. ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
|
29. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
|
32. ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.
|
33. ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
|