1. ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
|
3. ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
|
5. ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
|
6. ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
|
8. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
|
9. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
|
10. ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
|
11. ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
|
12. ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
|
14. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
|
15. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
|
17. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
|
18. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
|
19. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
|
20. ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
|
21. ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
|
22. ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
|
23. ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
|
24. ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
|
27. ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
|
28. ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
|
29. ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
|
30. ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
|
34. ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--
|
35. ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
|