1. ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
|
4. ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.
|
5. ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
|
6. ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
|
7. ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
|
8. ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
|
9. ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
|
10. ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
|
12. ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
|
14. ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
|
15. ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
|
17. ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
|
18. ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
|
21. ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
|
23. ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
|