1. ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
|
2. ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
|
7. ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
|
8. ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
|
10. ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
|
11. ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
|
12. ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
|
13. ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
|
16. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
|
17. ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
|
19. ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
|
20. ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
|
21. ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
|
22. ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
|
23. ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
|
24. ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
|
25. ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
|
27. ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
|
29. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
|
30. ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
|
34. ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
|
35. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
|
36. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
|
37. ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
|
38. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
|
39. ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
|
40. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
|
41. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;
|
42. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
|