1. ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
|
4. (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
|
5. ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
|
7. ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
|
9. ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
|
10. ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
|
12. ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
|
15. ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
|
17. ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
|
20. ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
|
21. ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
|
22. ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
|
23. (ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
|
24. ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
|
25. ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
|
26. ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
|
27. ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
|
34. ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
|
35. ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
|
36. ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
|
37. ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
|
38. ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
|
39. ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
|
43. ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
|
44. ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
|
46. ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
|
48. ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
|
49. ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
|
51. ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.
|