1. ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
|
2. ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
|
4. ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
|
6. ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
|
7. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
|
9. ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
|
10. ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
|
11. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
|
12. ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
|
14. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
|
15. ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
|
16. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
|
17. ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
|
18. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
|
19. ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
|
20. ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
|
21. ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
|
22. ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
|
23. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
|
25. ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
|
26. ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
|
27. ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
|
28. ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
|