1. ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
|
5. ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
|
6. ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
|
9. ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
|
10. ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
|
11. ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
|
12. ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
|
14. ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
|
15. ಆ ಸ್ತ್ರೀಯು ಆತನಿಗೆ--ಅಯ್ಯಾ, ನನಗೆ ನೀರಡಿಕೆಯಾಗದಂತೆಯೂ ನೀರು ಸೇದುವದಕ್ಕೆ ನಾನು ಇಲ್ಲಿಗೆ ಬಾರದಂತೆಯೂ ನನಗೆ ಈ ನೀರನ್ನು ಕೊಡು ಅಂದಳು.
|
17. ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
|
18. ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.
|
20. ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
|
21. ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
|
22. ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
|
23. ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
|
25. ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
|
27. ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
|
33. ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
|
34. ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
|
35. ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
|
36. ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
|
38. ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
|
39. ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
|
40. ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
|
42. ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
|
45. ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
|
46. ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
|
47. ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
|
50. ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
|
52. ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
|
53. ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
|