2. ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
|
3. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
|
4. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
|
5. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
|
7. ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
|
8. ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
|
9. ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
|
11. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
|
13. ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
|
14. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
|
15. ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
|
16. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
|
17. ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
|
18. ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
|
19. ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
|
20. ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
|
22. ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
|
29. ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
|
30. ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
|
31. ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
|
32. ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
|
34. ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
|
35. ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
|
39. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
|
40. ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
|
41. ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
|
43. ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
|