1. ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
|
2. ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
|
3. ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
|
4. ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
|
5. ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
|
7. ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
|
8. ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
|
9. ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
|
10. ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
|
12. ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
|
14. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
|
15. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
|
17. ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
|
18. ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
|
19. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
|
20. ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
|
21. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
|
23. ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
|
24. ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
|
25. ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
|
28. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
|
29. ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
|
30. ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
|
32. ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
|
33. ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
|
34. ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
|
35. ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
|
36. ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
|
37. ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
|
39. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
|
40. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
|
41. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
|
42. ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
|
43. ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.
|
44. ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
|