1. ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
|
4. ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
|
5. ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
|
6. ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
|
7. ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
|
8. ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
|
9. ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
|
10. ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
|
11. ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.
|
12. ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
|
13. ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
|
15. ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
|
16. ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು.
|
17. ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
|
18. ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
|
19. ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
|
20. ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
|
21. ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
|
22. ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
|
23. ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
|
24. ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
|
25. ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
|
26. ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟುಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
|
27. ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
|