2. ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
|
3. ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
|
4. ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
|
5. ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
|
6. ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
|
7. ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
|
9. ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
|
10. ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
|
12. ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
|
13. ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
|
15. ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
|
17. ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
|
18. ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
|
22. ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
|
23. ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
|
24. ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
|