1. ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
|
2. ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
|
5. ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
|
11. ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
|
15. ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ
|
16. ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ
|
19. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.
|
21. ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
|
22. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
|
23. ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
|
24. ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.
|
25. ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
|
28. ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
|
29. ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
|
30. ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
|
33. ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.
|
34. ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
|
35. ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
|