1. ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
|
2. ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
|
3. ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
|
4. ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
|
5. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
|
6. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
|
8. ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
|
9. ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
|
11. ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
|
13. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
|
14. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
|
19. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
|
21. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
|
25. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
|
26. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
|
27. ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
|
28. ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
|