1. ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
|
2. ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
|
3. ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
|
8. ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
|
9. ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
|
19. ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
|
22. ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
|