1. ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
|
2. ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
|
3. ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
|
4. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
|
5. ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
|
6. ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
|
7. ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
|
9. ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.
|
10. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
|
11. ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
|
13. ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
|
14. ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
|
15. ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
|
17. ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
|
19. ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
|
20. ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.
|