1. ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
|
2. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
|
4. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
|
6. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
|
7. ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
|
8. ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
|
9. ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
|
10. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
|
11. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
|
13. ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
|
15. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
|
16. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
|
17. ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
|
19. ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
|
20. ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
|
21. ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
|
22. ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
|
23. ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
|
25. ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
|
26. ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
|
27. ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
|