3. ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
|
5. ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
|
6. ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
|
7. ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
|
9. ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
|
10. ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
|
11. ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
|
13. ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
|
14. ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
|
15. ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
|
16. ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
|
17. ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
|
19. ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
|
20. ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
|
22. ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
|
23. ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
|
24. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
|